ನಾಳೆ ಸಿದ್ದಗಂಗಾ ಮಠಕ್ಕೆ ಅಮಿತ್ ಷಾ: ಎಲ್ಲೆಡೆ ಭದ್ರತೆಗೆ ಕ್ರಮ

ನಾಳೆ ಸಿದ್ದಗಂಗಾ ಮಠಕ್ಕೆ ಅಮಿತ್ ಷಾ: ಎಲ್ಲೆಡೆ ಭದ್ರತೆಗೆ ಕ್ರಮ, bevarahani=tumakuru-siddagangamutt-amith-shah

ನಾಳೆ ಸಿದ್ದಗಂಗಾ ಮಠಕ್ಕೆ ಅಮಿತ್ ಷಾ: ಎಲ್ಲೆಡೆ ಭದ್ರತೆಗೆ ಕ್ರಮ

ನಾಳೆ ಸಿದ್ದಗಂಗಾ ಮಠಕ್ಕೆ ಅಮಿತ್ ಷಾ: ಎಲ್ಲೆಡೆ ಭದ್ರತೆಗೆ ಕ್ರಮ


ತುಮಕೂರು: ಇಲ್ಲಿನ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಾಳೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ.


ಈ ಹಿನ್ನೆಲೆಯಲ್ಲಿ ಶ್ರೀಮಠದ ಆವರಣದಲ್ಲಿ ಅತ್ಯಂತ ಬಿಗಿ ಭದ್ರತೆಗೆ ಆದ್ಯತೆ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಎಸ್‌ಪಿಜೆ ಭದ್ರತಾ ಪಡೆಯಿಂದ ತಪಾಸಣೆ ನಡೆಸಲಾಯಿತು. ಅಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗಡ ಎಡಿಜಿಪಿ ಪ್ರತಾಪ್ ರೆಡ್ಡಿ ಹಾಗೂ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಪರಿಶೀಲನೆ ನಡೆಸಿದರು. ಇದರೊಂದಿಗೆ ಶ್ರೀಗಳ ಗದ್ದುಗೆ ಮಂದಿರದ ಸುತ್ತಮುತ್ತ ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು.