ಜೆಸಿಎಂಗೆ ಇಂದು ಅಭಿನಂದನೆ

jcm-felicitation-today

ಜೆಸಿಎಂಗೆ ಇಂದು ಅಭಿನಂದನೆ



ಜೆಸಿಎಂಗೆ ಇಂದು ಅಭಿನಂದನೆ

ಹುಳಿಯಾರು: ಹುಳಿಯಾರು ಹಾಗೂ ತಿಮ್ಲಾಪುರ ಕೆರೆಗಳಿಗೆ ಹೇಮಾವತಿ ನೀರು ಹರಿಸಿದ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರಿಗೆ ಡಿ.30 ರ ಗುರುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


         ಇದೇ ಸಂದರ್ಭದಲ್ಲಿ ತಿಮ್ಲಾಪುರ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಸಹ ಏರ್ಪಡಿಸಲಾಗಿದ್ದು ಹುಳಿಯಾರು ಪಟ್ಟಣ ಪಂಚಾಯ್ತಿ, ಹೋಬಳಿಯ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು. ಉಪಾಧ್ಯಕ್ಷರು, ಸದಸ್ಯರು, ಹಾಗೂ ಮಾಜಿ ಜಿಪಂ ತಾಪಂ ಸದಸ್ಯರು ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.


         ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜೆಸಿಎಂ ಅಭಿಮಾನಿ ಬಳಗದವರು ತಿಳಿಸಿದ್ದಾರೆ.