ಬಿಜೆಪಿಯಿಂದ ಜನರ ವಿಭಜನೆ- ರಾಹುಲ್ , ಮುರುಘಾಮಠಕ್ಕೆ ರಾಹುಲ್ ಭೇಟಿ

ಬಿಜೆಪಿಯಿಂದ ಜನರ ವಿಭಜನೆ- ರಾಹುಲ್ , ಮುರುಘಾಮಠಕ್ಕೆ ರಾಹುಲ್ ಭೇಟಿ

ಬಿಜೆಪಿಯಿಂದ ಜನರ ವಿಭಜನೆ- ರಾಹುಲ್ 

ದಾವಣಗೆರೆ: ರಾಜ್ಯ ಬಿಜೆಪಿ ಸರ್ಕಾರ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಹದಗೆಡಿಸಿ, ಜನರನ್ನು ವಿಭಜನೆ ಮಾಡುತ್ತಿದೆ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ 75ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ಸಾಮುದಾಯಗಳು ಶಾಂತಿ, ಸಾಮರಸ್ಯದಿಂದ ಬಾಳುತ್ತಿದ್ದರು. ಯಾರಿಗೂ ಭಯವಿರಲಿಲ್ಲ. ಆದರೆ, ಈಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಅಶಾಂತಿ ನೆಲೆಸಿದೆ. ಇವತ್ತಿನ ಕರ್ನಾಟದಲ್ಲಿನ ಸಾಮರಸ್ಯದ ಬಗ್ಗೆ ಅಮೆರಿಕದಲ್ಲೂ ಚರ್ಚೆಯಾಗುತ್ತಿದ್ದು, ಈಗ ಸರ್ವ ಧರ್ಮ, ಸಾಮರಸ್ಯ ಕಾಣುತ್ತಿಲ್ಲ ಎಂದು ಅಮೆರಿಕದ ಪ್ರಜೆಗಳು ಹೇಳುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸಾಮರಸ್ಯ ಮೂಡಿಸಿದರೆ ಬಿಜೆಪಿ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜನರನ್ನು ವಿಭsಜನೆ ಮಾಡುತ್ತಿದೆ ಎಂದರು.

ಯಾವುದೇ ಉದ್ಯಮ, ವ್ಯಾಪಾರ ಯಶಸ್ವಿಯಾಗಲು ಶಾಂತಿ ಪ್ರಮುಖವಾಗಿರುತ್ತದೆ. ಆದರೆ, ಈಗಿನ ಬಿಜೆಪಿ ಸರ್ಕಾರಕ್ಕೆ ಜನರ ಜೀವನದ ಬಗ್ಗೆ ಬದ್ಧತೆ ಇಲ್ಲ. ವ್ಯಾಪಕ ರೀತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಬಸವಣ್ಣನವರ ತತ್ವಕ್ಕೆ ವಿರುದ್ಧವಾಗಿ ಆಡಳಿತ ನಡೆಸಲಾಗುತ್ತಿದೆ. ನೋಟ್ ಅಮಾನ್ಯೀಕರಣ ಕೇಂದ್ರ ಸರ್ಕಾರದ ದೊಡ್ಡ ಸಾಧನೆ. ಇದರಿಂದಾಗಿ ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕೆಗಳು ನಾಶವಾದವು. ನೋಟ್ ಅಮಾನ್ಯೀಕರಣ, ಜಿಎಸ್‌ಟಿ ಹೆಸರಿನಲ್ಲಿ ದೇಶಕ್ಕೆ ವಂಚನೆ ಮಾಡಿದ್ದಾರೆ. ಇದರ ಹಿಂದಿನ ಉದ್ದೇಶ ಕಾರ್ಮಿಕರು, ರೈತರು, ಸಂಪೂರ್ಣವಾಗಿ ನಾಶ ಮಾಡಿ, ಕೆಲವರನ್ನು ಉದ್ದಾರ ಮಾಡುವ ಯೋಜನೆಯಾಗಿದೆ ಎಂದರು. 

ಸಿದ್ದರಾಮಯ್ಯ ಅವಧಿಯಲ್ಲಿ ಕ್ಷೀರಭಾಗ್ಯ, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಾಗಿತ್ತು. ಕರ್ನಾಟಕದ ಭಾಷೆ, ಸಂಸ್ಕöÈತಿ, ಜೀವನದ ಬಗ್ಗೆ ಸಹಮತವಿದೆ. ಕರ್ನಾಟಕದ ಸಂಸ್ಕöÈತಿ, ಉಳಿಸಿ, ಬೆಳೆಸಲು ಜನರ ಆಶೀರ್ವಾದ ಬಹಳ ಮುಖ್ಯವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಜನರಲ್ಲಿ ರಾಹುಲ್ ಗಾಂಧಿ ಮನವಿ ಮಾಡಿದರು. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ ಸಿದ್ದರಾಮಯ್ಯ ಕೇವಲ ಹಿಂದುಳಿದ ವರ್ಗಗಳ ನಾಯಕರಲ್ಲ, ಅವರು ಸರ್ವ ಜನಾಂಗ, ಧರ್ಮದ ನಾಯಕ. ಅವರ ಮುಂದಾಳತ್ವದಲ್ಲಿ ಕೆಲಸ ಮಾಡೋಣ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯೋಣ. ಈ ನಿಟ್ಟಿನಲ್ಲಿ ಒಗಟ್ಟಿನಿಂದ ದುಡಿಯೋಣ ಎಂದು ಜನರಿಗೆ ಕರೆ ನೀಡಿದರು.

ಮುರುಘಾಮಠಕ್ಕೆ ರಾಹುಲ್ ಭೇಟಿ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನದ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರು ಬುಧವಾರ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಶರಣರ ಆಶೀರ್ವಾದ ಪಡೆದುಕೊಂಡರು.


ಹುಬ್ಬಳ್ಳಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜತೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್‌ಗಾಂಧಿ ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದು ಅವರ ಜತೆ ಸ್ವಲ್ಪಹೊತ್ತು ಚರ್ಚೆ ನಡೆಸಿದರು.


ಇದಾದ ನಂತರ ರಾಹುಲ್‌ಗಾಂಧಿಯವರು ಮಠದ ಆವರಣದಲ್ಲೇ ಸುಮಾರು 30 ಮಠಾಧೀಶರ ಜತೆ ಸಂವಾದ ನಡೆಸಿದರು.


ನಂತರ ಅವರು ಚಿತ್ರದುರ್ಗದಿಂದ ದಾವಣಗೆರೆಗೆ ತೆರಳಿದರು.