ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ: ಜ.1ರಿಂದ ನೋಂದಣಿ ಆರಂಭ: ಡಿಸಿ 

ragi-buy-jANUARY-1-20211-DC-patil

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ: ಜ.1ರಿಂದ ನೋಂದಣಿ ಆರಂಭ: ಡಿಸಿ 


ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ:
ಜ.1ರಿಂದ ನೋಂದಣಿ ಆರಂಭ: ಡಿಸಿ 


ತುಮಕೂರು: ಜಿಲ್ಲೆಯಲ್ಲಿ 2021-22ನೇ ಮುಂಗಾರು ಋತುವಿನ ಅವಧಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು 2022ರ ಜನವರಿ 1 ರಿಂದ ನೋಂದಣಿ ಪ್ರಕ್ರಿಯೆಯನ್ನು  ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿಸಲು ಜನವರಿ 1 ರಿಂದ 20ರವರೆಗೆ ಕೋವಿಡ್ ನಿಯಮಗಳನ್ನು ಅನುಸರಿಸುವ ಮೂಲಕ ರೈತರ ನೊಂದಣಿಗೆ ಸೂಕ್ತ ಕ್ರಮ ಕೈಗೊಳ್ಳುವುದಲ್ಲದೆ, ವ್ಯವಸ್ಥಿತವಾಗಿ ನೊಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು.  
ರೈತರು ನೊಂದಣಿಯನ್ನು ಆಯಾ ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಮಾಡಿಕೊಳ್ಳಬೇಕಾಗುತ್ತದೆ. ಕೃಷಿ ಇಲಾಖೆ ನೀಡಿರುವ fruits-id ಯನ್ನು ಮಾತ್ರ ಹಾಜರುಪಡಿಸಿ ನೊಂದಾಯಿಸಿಕೊಳ್ಳಬೇಕು ಎಂದರಲ್ಲದೆ, ಸರ್ಕಾರ ನಿಗದಿಪಡಿಸಿರುವ ಮಾನದಂಡವನ್ನು ಅನುಸರಿಸಿ ಎಫ್.ಎ.ಕ್ಯೂ. ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿ ಮಾಡಬೇಕು. ಕಳಪೆ ಗುಣಮಟ್ಟದ ರಾಗಿ ಖರೀದಿಯಾದರೆ ಸಂಬAಧಿಸಿದ ಖರೀದಿ ಅಧಿಕಾರಿ ಮತ್ತು ಕೃಷಿ ಇಲಾಖೆಯ ಗ್ರೇಡರ್‌ಗಳನ್ನೇ ಜವಾಬ್ದಾರಿ ಮಾಡಲಾಗುವುದು ಎಂದು ತಿಳಿಸಿದರು. 


ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯನ್ನು ಜನವರಿ 21 ರಿಂದ ಪ್ರಾರಂಭಿಸಬೇಕು. ಸರ್ಕಾರದಿಂದ ಪ್ರತಿ ಕ್ವಿಂಟಾಲ್ ರಾಗಿಗೆ 3377 ರೂ.ಗಳ ಖರೀದಿ ದರವನ್ನು ನಿಗದಿಪಡಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‌ನAತೆ ಗರಿಷ್ಟ 20 ಕ್ವಿಂಟಾಲ್‌ವರೆಗೆ ಮಾತ್ರ ರಾಗಿಯನ್ನು ಖರೀದಿಸಲಾಗುವುದು. ಸರ್ಕಾರ ನಿಗದಿಪಡಿಸಿದ ಪ್ರಮಾಣವನ್ನು ಮೀರಿ ಹೆಚ್ಚುವರಿಯಾಗಿ ರಾಗಿಯನ್ನು ಖರೀದಿಸುವಂತಿಲ್ಲ.  ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಹಾಗೂ ನೊಂದಣಿ ಪ್ರಕ್ರಿಯೆಯಲ್ಲಿ ಬೋಗಸ್ ಗ್ರೇಡಿಂಗ್, ಮತ್ತಿತರ ಲೋಪವೆಸಗುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಂಬAಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ರಾಗಿ ಖರೀದಿ ಮತ್ತು ನೊಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು. 


ಪ್ರತಿ ರಾಗಿ ಖರೀದಿ ಕೇಂದ್ರಕ್ಕೆ ಖರೀದಿ ಸಿಬ್ಬಂದಿ ಮತ್ತು ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯ ಪರಿಕರಗಳನ್ನು ಒದಗಿಸಬೇಕು. ತಿಪಟೂರು ಮತ್ತು ಕುಣಿಗಲ್ ತಾಲ್ಲೂಕುಗಳಲ್ಲಿ ಖರೀದಿ ಪ್ರಮಾಣ ಹೆಚ್ಚಾಗುವ ಸಂಭವವಿರುವುದರಿAದ ಹೆಚ್ಚುವರಿ ಸಿಬ್ಬಂದಿ ಹಾಗೂ ನುರಿತ ಗ್ರೇಡರ್‌ಗಳನ್ನು ನೇಮಿಸಬೇಕು. ಖರೀದಿ ಪ್ರಕ್ರಿಯೆಗೆ ನಿಯೋಜಿಸುವ ಗ್ರೇಡರ್‌ಗಳಿಗೆ ಅಗತ್ಯ ತರಬೇತಿ ನೀಡಬೇಕು. ಖರೀದಿ ಪ್ರಕ್ರಿಯೆಯು ಮಾರ್ಚ್ 31ರವರೆಗೆ ನಡೆಯಲಿದ್ದು, ರೈತರಿಗೆ ಸಮಸ್ಯೆಯಾಗದಂತೆ ಯಾವುದೇ ದೂರು ಬಾರದಂತೆ ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದರು.  


ಖರೀದಿ ಕೇಂದ್ರಗಳಿಗೆ ರಾಗಿ ಮಾರಾಟ ಮಾಡಲು ಬರುವ ರೈತರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಬೇಕೆಂದರಲ್ಲದೆ,fruits-id ಯಲ್ಲಿ  ನೋಂದಣಿಯಾದ ರೈತರು ಮಾತ್ರ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಲು ಅವಕಾಶವಿದೆ ಎಂಬ ಮಾಹಿತಿಯನ್ನು ರೈತರಿಗೆ ನೀಡಬೇಕು. ವಿನಾಕಾರಣ ಅವರನ್ನು ಅಲೆದಾಡಿಸಬಾರದು ಎಂದರು.  


ಜಿಲ್ಲೆಯಲ್ಲಿ ಕಳೆದ 2020-21ನೇ ಸಾಲಿನಲ್ಲಿ 8,32,92.350 ಮೆ.ಟನ್ ರಾಗಿ ಖರೀದಿಯಾಗಿದ್ದು, ಈ ಸಾಲಿನಲ್ಲಿಯೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬರಬಹುದೆಂದು ಅಂದಾಜಿಸಲಾಗಿದೆ. ಖರೀದಿ ಕೇಂದ್ರದಲ್ಲಿ ಖರೀದಿಸಿದ ದಾಸ್ತಾನು ಸಂಗ್ರಹ ಮಾಡಲು ಅಗತ್ಯ ಗೋದಾಮುಗಳನ್ನು ಕಾಯ್ದಿರಿಸಬೇಕು.  ಕಳೆದ ವರ್ಷ ಎದುರಿಸಿದ ಸಮಸ್ಯೆಗಳು ಮರುಕಳಿಸದಂತೆ ಜಾಗ್ರತೆ ವಹಿಸಬೇಕು. ರೈತರಿಂದ ಯಾವುದೇ ದೂರು ಬಂದರೆ ನಾನು ಸಹಿಸುವುದಿಲ್ಲವೆಂದು ಎಚ್ಚರಿಕೆ ನೀಡಿದರು. 


ರಾಗಿ ಖರೀದಿ ಕೇಂದ್ರಗಳನ್ನು ಎಪಿಎಂಸಿ ಆವರಣಗಳಲ್ಲಿ ತೆರೆಯಬೇಕು. ಈ ಖರೀದಿ ಕೇಂದ್ರದಲ್ಲಿ ಕನಿಷ್ಟ 1000 ದಿಂದ 2000 ಕ್ವಿಂಟಾಲ್ ದಾಸ್ತಾನು ಮಾಡಿಕೊಳ್ಳುವ ಸಾಮರ್ಥ್ಯವಿರುವ ಸ್ಥಳವನ್ನು ಗುರುತಿಸಿ ಸದರಿ ಸ್ಥಳದಲ್ಲಿಯೇ ಖರೀದಿ ಕೇಂದ್ರವನ್ನು ತೆರೆಯಬೇಕು ಎಂದು ತಿಳಿಸಿದರಲ್ಲದೆ, ಆಯಾ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಎಪಿಎಂಸಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಂದಾಯ, ಕೃಷಿ ಇಲಾಖೆ ಸಿಬ್ಬಂದಿಗಳನ್ನೊಳಗೊAಡ ತಾಲ್ಲೂಕು ಮಟ್ಟದ ಸಮಿತಿ ರಚಿಸಲಾಗಿದ್ದು, ಸಮಿತಿಯು ರೈತರ ನೋಂದಣಿ ಕೇಂದ್ರ ಮತ್ತು ರಾಗಿ ಕೇಂದ್ರಗಳಿಗೆ ಆಗಿಂದಾಗ್ಗೆ ಭೇಟಿ ನೀಡಿ ಖರೀದಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ಮೇಲ್ವಿಚಾರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. 


ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸುತ್ತಿರುವ ಬಗ್ಗೆ ಆಯಾ ವ್ಯಾಪ್ತಿಯ ಶಾಸಕರು ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕೆಂದು ನಿರ್ದೇಶನ ನೀಡಿದರು. 


ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಕುಣಿಗಲ್, ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಮಧುಗಿರಿ, ತುಮಕೂರು, ಸಿರಾ ತಾಲ್ಲೂಕು ಸೇರಿದಂತೆ  ಹುಳಿಯಾರಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಖರೀದಿ ಕೇಂದ್ರಗಳ ಜೊತೆಗೆ ಪ್ರಸಕ್ತ ಸಾಲಿನಲ್ಲಿ ತಿಪಟೂರು ಮತ್ತು ಕುಣಿಗಲ್ ತಾಲ್ಲೂಕಿನಲ್ಲಿ ಹೆಚ್ಚುವರಿಯಾಗಿ ತಲಾ 1 ಖರೀದಿ ಕೇಂದ್ರವನ್ನು ತೆರೆಯಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. 


ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸಯ್ಯ, ಕೃಷಿ ಇಲಾಖೆಯ ಅಶೋಕ್, ಆಹಾರ ಇಲಾಖೆ, ಕಾನೂನು ಮಾಪನ ಶಾಸ್ತç ಇಲಾಖೆ, ಉಗ್ರಾಣ ನಿಗಮ, ಎಪಿಎಂಸಿ, ಕೆಎಫ್‌ಸಿಎಸ್‌ಸಿ ಅಧಿಕಾರಿ/ಸಿಬ್ಬಂದಿ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.