ಜಾತಿಗೆ ಸೀಮಿತವಾದ ಜಯಂತಿಗಳು: ವಿಷಾದ ಡಾ.ಬಿ..ಸಿ.ಶೈಲಾ ನಾಗರಾಜ್ ಅವರಿಗೆ `ಇಂದಿರಾ ರತ್ನ’ ಪ್ರಶಸ್ತಿ ಪ್ರದಾನ

ಜಾತಿಗೆ ಸೀಮಿತವಾದ ಜಯಂತಿಗಳು: ವಿಷಾದ ಡಾ.ಬಿ..ಸಿ.ಶೈಲಾ ನಾಗರಾಜ್ ಅವರಿಗೆ `ಇಂದಿರಾ ರತ್ನ’ ಪ್ರಶಸ್ತಿ ಪ್ರದಾನ

ಜಾತಿಗೆ ಸೀಮಿತವಾದ ಜಯಂತಿಗಳು: ವಿಷಾದ
ಡಾ.ಬಿ..ಸಿ.ಶೈಲಾ ನಾಗರಾಜ್ ಅವರಿಗೆ `ಇಂದಿರಾ ರತ್ನ’ ಪ್ರಶಸ್ತಿ ಪ್ರದಾನ


ತುಮಕೂರು: ಕನಕ, ಅಂಬೇಡ್ಕರ್, ವಾಲ್ಮೀಕಿ, ಬಸವ ಜಯಂತಿ ಕಾರ್ಯಕ್ರಮಗಳನ್ನು ಜಾತಿಗೆ ಸೀಮಿತಗೊಳಿಸಿ ಅರ್ಥಹೀನವಾಗಿ ನಡೆಸಲಾಗುತ್ತಿದೆ ಇದು ತಪ್ಪಬೇಕು. ಅವರು ಸಮಾಜದ ಎಲ್ಲಾ ವರ್ಗಕ್ಕೆ ಸೇರಿದವರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಕನಕ, ಬಸವ, ಅಂಬೇಡ್ಕರ್, ವಾಲ್ಮೀಕಿ ಜಯಂತಿಗಳನ್ನು ಸರ್ಕಾರಗಳು ಮಾಡುತ್ತವೆ. ಆಯಾ ಜಾತಿಯ ಮುಖಂಡರು, ಶಾಸಕರನ್ನು ಕರೆಸಿ ಪ್ರಶಸ್ತಿ ಕೊಡಿಸಿ ಕರ‍್ಯಕ್ರಮ ಮುಗಿಸುವುದರಿಂದ ಯಾರಿಗೂ ಆ ಮಹನೀಯರ ಕುರಿತು ಮಾಹಿತಿ ತಿಳಿಯುವುದಿಲ್ಲ. ಕಣ್ಣಿಗೆ ಪಟ್ಟಿಕೊಂಡAತೆ ಕರ‍್ಯಕ್ರಮ ನಡೆಸುತ್ತಾರೆ. ಹಾಗಾಗಿ ಕರ್ನಾಟಕ ಲೇಖಕಿಯರ ಸಂಘ ಶಾಲೆಗಳಿಗೆ ಹೋಗಿ ಕನಕ, ವಾಲ್ಮೀಕಿ, ಅಂಬೇಡ್ಕರ್ ಕುರಿತು ಪ್ರಬಂಧ ಬರೆಯುವ ಸ್ಪರ್ಧೆ, ಹಾಡುವ ಸ್ಪರ್ಧೆ ಮಾಡಿ ವಿದ್ಯಾರ್ಥಿಗಳನ್ನು ಕನ್ನಡದ ಕಡೆ ಸೆಳೆಯುವ ಕೆಲಸ ಮಾಡಬೇಕು ಎಂದು ಸಾಹಿತಿ ಡಾ. ಕೆ.ಆರ್. ಸಂಧ್ಯಾ ರೆಡ್ಡಿ ಸಲಹೆ ನೀಡಿದರು. 
ಕರ್ನಾಟಕ ಲೇಖಕಿಯರ ಸಂಘ ಮತ್ತು ಕರ್ನಾಟಕ ಲೇಖಕಿಯರ ಸಂಘ ತುಮಕೂರು ಜಿಲ್ಲಾ ಶಾಖೆಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಮತ್ತು ಇಂದಿರಾರತ್ನ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲೇಖಕಿ ಡಾ. ಬಿ.ಸಿ. ಶೈಲಾ ನಾಗರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. 
ದೊಡ್ಡದೊಡ್ಡ ಸಾಹಿತಿಗಳು, ವಿಮರ್ಶಕರಿಗೆ ಜನಸಾಮಾನ್ಯರು ಲೆಕ್ಕಕ್ಕೇ ಇಲ್ಲ. ಸಾಮಾನ್ಯರ ಅಭಿರುಚಿ ಏನು ಎಂದು ತಿಳಿದುಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಅವರು ಶ್ರೇಷ್ಟತೆಯ ವ್ಯಸನದಿಂದ ನರಳುತ್ತಿದ್ದು, ಮಹಿಳಾ ಸಾಹಿತ್ಯವನ್ನು ಅವಗಣನೆಯಿಂದ ನೋಡಲಾಗುತ್ತಿದೆ. ಶ್ರೇಷ್ಟತೆಯ ವ್ಯಸನದಿಂದ ಹೊರಬರಬೇಕು. ಜನಸಾಮಾನ್ಯರಲ್ಲಿ ಸಾಹಿತ್ಯಾಭಿರುಚಿಯನ್ನು ಬೆಳೆಸುವುದು ಹೇಗೆ ಎಂಬ ಬಗ್ಗೆ ಯೋಚಿಸಬೇಕಾಗಿದೆ. ಯುವಜನರು ಮತ್ತು ಮಕ್ಕಳಲ್ಲಿ ಸಾಹಿತ್ಯಾಸಕ್ತಿಯನ್ನು ಮೂಡಿಸಲು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. 
ರಾಜ್ಯೋತ್ಸವ ಒಂದು ವಾರ್ಷಿಕ ಆಚರಣೆಯಾಗಿ ಕಾಣುತ್ತಿದೆ. ಕನ್ನಡ ವಾತಾವರಣ ಇಲ್ಲವಾಗಿದೆ. ಅದನ್ನು ಹೇಗೆ ಒಡಮೂಡಿಸಬೇಕಾಗಿದೆ, ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಯುವಜನರಲ್ಲಿ ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಅರಿವು ಮುಡಿಸುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು. 
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪತ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ ಇಂದಿರಾರತ್ನ ದತ್ತಿ ನಿಧಿ ಇಟ್ಟಿರುವ ರಾಜನ್ ಅವರನ್ನು ಸ್ಮರಿಸಿದರು. ಡಾ. ಶೈಲಾ ನಾಗರಾಜ್ ಅವರಿಗೆ ಇಂದಿರಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು ಸ್ವಾಗತಿಸಿದರು. ರಾಣಿ ಚಂದ್ರಶೇಖರ್ ಕರ‍್ಯಕ್ರಮ ನಿರೂಪಿಸಿದರು. ಪಾರ್ವತಮ್ಮ ರಾಜಕುಮಾರ, ಕಾವ್ಯ, ಗಂಗಲಕ್ಷಿö್ಮ ಸಂಗಡಿಗರು ಹಾಡುಗಳನ್ನು ಹಾಡಿದರು.